Tuesday, 2 November 2021

ಕಾಯೌ ಶ್ರೀಗೌರಿ ಕರುಣಾಲಹರಿ

                                                        ಕಾಯೌ ಶ್ರೀಗೌರಿ ಕರುಣಾಲಹರಿ 

ರಚನೆ: ಅಭಿನವ ಕಾಳಿದಾಸ ಶ್ರೀ ಬಸವಪ್ಪ ಶಾಸ್ತ್ರೀ




(ಶ್ರೀಚಾಮುಂಡೇಶ್ವರಿ ಅಮ್ಮನವರ ಚಿತ್ರ- ಮೈಸೂರು ಸಿದ್ಧಲಿಂಗಸ್ವಾಮಿಗಳವರ ಚಿತ್ರಕಲೆ)

 

ಕಾಯೌ ಶ್ರೀಗೌರಿ ಕರುಣಾಲಹರಿ 

ತೋಯಜಾಕ್ಷಿ ಶಂಕರೀಶ್ವರಿ  ॥ಪ॥


ವೈಮಾನಿಕ ಭಾಮಾರ್ಚಿತ ಕೋಮಲಕರಪಾದೇ 

ಸೀಮಾತಿಗ( ಶ್ರೀಮಾನ್ವಿತ?) ಭೂಮಾಸ್ಪದೆ ಕಾಮಿತಫಲದೇ 


ಶುಂಭಾದಿಮದಾಂಭೋನಿಧಿ ಕುಂಭಜನಿಭದೇವಿ

ಜಂಭಾಹಿತ ಸಂಭಾವಿತೆ ಶಾಂಭವಿ ಶುಭವೀ


(ಚಾಮಾರಾಜೇಂದ್ರ ಒಡೆಯರ ಕಾಲದಲ್ಲಿ)

ಶ್ಯಾಮಾಲಿಕೆ ಚಾಮುಂಡಿಕೆ ಸೋಮಕುಲಜ ಚಾಮ

ನಾಮಾಂಕಿತ ಭೂಮೀಂದ್ರ ಲಲಾಮನ ಮುದದೇ (ಮುದದಿ?)


(ನಾಲ್ವಡಿ ಕೃಷ್ಣರಾಜರ ಕಾಲದಲ್ಲಿ)

ಶ್ಯಾಮಾಲಿಕೆ ಚಾಮುಂಡಿಕೆ ಸೋಮಕುಲಜ ಕೃಷ್ಣ

ನಾಮಾಂಕಿತ ಭೂಮೀಂದ್ರ ಲಲಾಮನ ಮುದದೇ (ಮುದದಿ?)


(ಜಯಚಾಮರಾಜರ ಕಾಲದಲ್ಲಿ)

ಶ್ರೀಜಯಚಾಮುಂಡಿಕೆ ಶ್ರೀಜಯಚಾಮೇಂದ್ರ-

ನಾಮಾಂಕಿತ ಭೂಮೀಂದ್ರ ಲಲಾಮನ ಮುದದೇ (ಮುದದಿ?)

(ಬಸವಪ್ಪ ಶಾಸ್ತ್ರಿಗಳು)

 ॥ಚಿರಮಭಿವರ್ಧತಾಂ ಯದುಸನ್ತಾನಶ್ರೀಃ ॥





ಸ್ವಾಮಿದೇವನೆ ಲೋಕಪಾಲನೆ

ರಚನೆ : ಸೋಸಲೆ ಅಯ್ಯಾ ಶಾಸ್ತ್ರೀ 

ಸ್ವಾಮಿದೇವನೆ ಲೋಕಪಾಲನೆ ತೇ ನಮೋಸ್ತು ನಮೋಸ್ತುತೇ
ಪ್ರೇಮದಿಂದಲಿ ನೋಡು ನಮ್ಮನು ತೇ ನಮೋಸ್ತು ನಮೋಸ್ತುತೇ|
ನೇಮಿಸೆಮ್ಮೊಳು ಧರ್ಮಕಾರ್ಯವ ತೇ ನಮೋಸ್ತು ನಮೋಸ್ತುತೇ
ಕ್ಷೇಮದಿಂದಲಿ ಪಾಲಿಸೆಮ್ಮನು ತೇ ನಮೋಸ್ತು ನಮೋಸ್ತುತೇ ||1||

ದೇವ ದೇವನೆ ಹಸ್ತ ಪಾದಗಳಿಂದಲೂ ಮನದಿಂದಲೂ
ನಾವು ಮಾಡಿದ ಪಾಪವೆಲ್ಲವ ಹೋಗಲಾಡಿಸು ಬೇಗನೆ|
ಕಾವರಿಲ್ಲವು ನಿನ್ನ ಬಿಟ್ಟರೆ ಸೂರ್ಯನೇ ಜಗದೀಶನೇ
ಜೀವಕೋಟಿಯು ನಿನ್ನ ಈ ಬೆಳಕಿಂದ ಜೀವಿಪುದಲ್ಲವೆ ||2||

ರಾತ್ರೆನಿದ್ದೆಯ ಗೈವ ಕಾಲದಿ ನೀನೆ ನಮ್ಮನು ಕಾದೆಯೈ
ಮಿತ್ರನೆಂಬುವ ನಾಮಧೇಯವು ಸತ್ಯವಾಯಿತು ನಿನ್ನೊಳು|
ಸ್ತೋತ್ರ ಮಾಡುವ ಹಾಗೆ ನಿನ್ನನ್ನು ಹಕ್ಕಿಗಳ್ ದನಿಗೈವವೈ
ಚಿತ್ರಭಾನುವೆ ನೋಡಿ ನಿನ್ನನದೆಲ್ಲಿ ಪೋದುದೊ ಕತ್ತಲೆ ||3||

ಉತ್ತಮೋತ್ತಮ ನಿನ್ನ ಪಾದದ ಭಕ್ತಿಯೇ ಸ್ಥಿರವಲ್ಲವೇ
ವಿತ್ತವೆಂಬುದು ಗಾಳಿಯಲ್ಲಿಹ ದೀಪದಂದದಿ ಚಂಚಲ|
ಮತ್ತರಾಗುತ ಬಿಟ್ಟು ನಿನ್ನನು ಕೆಟ್ಟ ಯೋಚನೆ ಗೈಯದಾ
ಚಿತ್ತವಂ ನಮಗಿತ್ತು ರಕ್ಷಿಸು ಪದ್ಮನಾಭ ಸುರೇಶನೇ ||4||

ಆಡುವಾಗಲು ನಾವು ಭೋಜನ ಮಾಡುವಾಗಲು ಸರ್ವದಾ
ನೋಡಿ ನೀ ದಯದಿಂದ ನಮ್ಮನು ಪಾಲಿಸೈ ಭಗವಂತನೇ|
ಬೇಡಿಕೊಂಬೆವು ನಮ್ಮ ದೇಹಕೆ ಸೌಖ್ಯವಂ ಬಲ ಪುಷ್ಟಿಯಂ
ನೀಡು ನಿನ್ನಯ ಪಾದಭಕ್ತಿಯನೆಂದಿಗೂ ಬಿಡಲಾರೆವು ||5||

ನಿನ್ನ ದರ್ಶನಗೈವ ನೇತ್ರದ ಜನ್ಮ ಸಾರ್ಥಕವಲ್ಲವೇ
ನಿನ್ನ ಪೂಜಿಪ ಹಸ್ತವೇ ಬಲುದೊಡ್ಡದಲ್ಲವೆ ದೇವನೇ|
ನಿನ್ನ ನಾಮವ ಪೇಳ್ವ ನಾಲಗೆ ಧನ್ಯವಲ್ಲವೆ ಸರ್ವದಾ
ನಿನ್ನ ಜಾನಿಪ ಚಿತ್ತವೃತ್ತಿಯೆ ಯೋಗ್ಯವಲ್ಲವೆ ಲೋಕದಿ ||6||

ನೀನೆ ತಾಯಿಯು ನೀನೆ ತಂದೆಯು ನೀನೆ ನಮ್ಮೊಡನಾಡಿಯೂ
ನೀನೆ ಬಂಧುವು ನೀನೆ ಭಾಗ್ಯವು ನೀನೆ ವಿದ್ಯೆಯು ಬುದ್ಧಿಯೂ|
ನೀನು ಪಾಲಿಸದಿದ್ದರೆಮ್ಮನು ಬೇರೆ ಪಾಲಿಪರಿಲ್ಲಲೈ
ದೀನಪಾಲನೆ ನಿನ್ನಧೀನದೊಳಿರ್ಪ ನಮ್ಮನು ಪಾಲಿಸೈ ||7||

ಶ್ರೀಮುಕುಂದನೆ ಗಾಳಿಯಲ್ಲಿಯು ನೀರಿನಲ್ಲಿಯು ನೀನಿಹೇ
ಭೂಮಿಯಲ್ಲಿಯು ಅಗ್ನಿಯಲ್ಲಿಯು ಬಾನಿನಲ್ಲಿಯು ನೀನಿಹೆ|
ರಾಮನೂ ನರಸಿಂಹನೂ ಪರಮಾತ್ಮ ಕೃಷ್ಣನು ನೀನೆಯೇ
ನೀ ಮಹಾತ್ಮನು ನಮ್ಮ ತಪ್ಪುಗಳೆಲ್ಲ ಮನ್ನಿಸಿ ಪಾಲಿಸೈ ||೮||

Mysore — The Fairy Tale I Walked Into

M ysore — The Fairy Tale I Walked Into.                                  By Srinidhi Ramachandra   The morning sun glowed softly upon the fi...